ಎಸ್ಸೆಸ್ಸೆಲ್ಸಿ ಪಧಿರೀಧಿಕ್ಷಾಧಿರ್ಥಿಧಿಗಧಿಳಿಗೆ ಶುಭ ಕೋರಿದ ವಿಧಾನಸಭೆ

Contributed byKENCHE GOWDA|Vijaya Karnataka

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 9,02,889 ವಿದ್ಯಾರ್ಥಿಗಳಿಗೆ ವಿಧಾನಸಭೆ ಮಂಗಳವಾರ ಧೈರ್ಯ ತುಂಬಿ ಶುಭ ಕೋರಿತು. ಭಯ, ಆತಂಕವಿಲ್ಲದೆ ಪರೀಕ್ಷೆ ಬರೆಯಲು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್, ಸಚಿವ ಮಧು ಬಂಗಾರಪ್ಪ, ಆರ್. ಅಶೋಕ್ ಅವರು ಸಲಹೆ ನೀಡಿದರು. ಮೂರು ಪರೀಕ್ಷೆಗಳ ಅವಕಾಶ ಇರುವುದರಿಂದ ಅಂಕಗಳ ಬಗ್ಗೆ ಚಿಂತೆ ಬೇಡ ಎಂದರು. ಪೋಷಕರು ಒತ್ತಡ ಹೇರಬಾರದು ಎಂದು ಆರ್. ಅಶೋಕ್ ತಿಳಿಸಿದರು.

sslc exam advice encouraging students by the legislative assembly
ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ 9,02,889 ವಿದ್ಯಾರ್ಥಿಗಳಿಗೆ ವಿಧಾನಸಭೆಯು ಮಂಗಳವಾರ ಧೈರ್ಯ ತುಂಬಿ ಶುಭ ಹಾರೈಸಿತು. ಪರೀಕ್ಷೆ ಬಗ್ಗೆ ಭಯ, ಆತಂಕ ಪಡದೆ, ಅಂಕಗಳ ಬಗ್ಗೆ ಚಿಂತೆ ಮಾಡದೆ ಚೆನ್ನಾಗಿ ಬರೆಯುವಂತೆ ಸ್ಪೀಕರ್ ಖಾದರ್, ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಗಣ್ಯರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇರುವುದರಿಂದ ಕಡಿಮೆ ಅಂಕ ಬಂದರೂ ಅಥವಾ ಅನುತ್ತೀರ್ಣರಾದರೂ ಚಿಂತಿಸಬೇಕಾಗಿಲ್ಲ ಎಂದು ಅವರು ಭರವಸೆ ನೀಡಿದರು.

"ವಿದ್ಯಾರ್ಥಿಗಳು ಭಯ, ಆತಂಕ ಇಲ್ಲದೆ ಪರೀಕ್ಷೆ ಎದುರಿಸಬೇಕು. ಮೂರು ಪರೀಕ್ಷೆಗಳ (ಪರೀಕ್ಷೆ 1, 2, 3) ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಮಕ್ಕಳು ಆತಂಕ ಪಡುವ ಅಗತ್ಯವಿಲ್ಲ," ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, "ಹಿಂದೆಲ್ಲಾ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಬಹಳಷ್ಟು ಸುಧಾರಣೆ ಮಾಡಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಭಯ ಬೇಡ," ಎಂದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್, "ಮಕ್ಕಳ ಮೇಲೆ ಪೋಷಕರು ಒತ್ತಡ ಹೇರಬಾರದು. ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಕ್ರಮ ವಹಿಸಬೇಕು," ಎಂದು ಸಲಹೆ ನೀಡಿದರು. ಈ ಮೂಲಕ ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ.