ಕಂದಾಯ ಸಿಬ್ಬಂದಿಗೆ ಯುಗಾದಿ ಹಬ್ಬದ ರಜೆ ಕೊಕ್

Contributed byKENCHE GOWDA|Vijaya Karnataka

ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ರಜೆಯನ್ನು ಕಂದಾಯ ಇಲಾಖೆಯ ಸಿಬ್ಬಂದಿಗೆ ರದ್ದುಗೊಳಿಸಲಾಗಿದೆ. ವಿಧಾನಸಭೆಯ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 9 ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾ.19ರಂದು ಕಚೇರಿಗೆ ಹಾಜರಾಗಬೇಕು. ಸ್ಪೀಕರ್ ಯು.ಟಿ.ಖಾದರ್ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ.

holiday granted to revenue staff for yugadi festival
ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನೆಗಳಿಗೆ ಉತ್ತರ ನೀಡಲು ಕಂದಾಯ ಇಲಾಖೆಯ 9 ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯುಗಾದಿ ಹಬ್ಬದ ರಜೆಯನ್ನು ರದ್ದುಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್‌ ಕಟಾರಿಯಾ ಅವರ ಸೂಚನೆ ಮೇರೆಗೆ, ಮುಜರಾಯಿ, ಭೂಮಂಜೂರಾತಿ, ಸೇವೆಗಳು -3, ಭೂಕಂದಾಯ, ಭೂಮಾಪನ, ಭೂಮಿ ಮತ್ತು ಭೂಸುಧಾರಣಾಕೋಶದ ಅಧಿಕಾರಿಗಳು ಮಾರ್ಚ್ 19ರಂದು (ಗುರುವಾರ) ಕಚೇರಿಗೆ ಹಾಜರಾಗಿ ವಿಧಾನಸಭೆಗೆ ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸಬೇಕು. ಸ್ಪೀಕರ್ ಯು.ಟಿ.ಖಾದರ್‌ ಅವರು ಸದಸ್ಯರ ಪ್ರಶ್ನೆಗಳಿಗೆ ಉತ್ತರ ಬಾರದ ಬಗ್ಗೆ ವಿಧಾನಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿಗಳ ಸೂಚನೆಯಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಸಂಬಂಧಪಟ್ಟ ಇಲಾಖೆಗಳ ಕಾರ್ಯದರ್ಶಿಗಳಿಗೆ ಲಿಖಿತ ವಿವರಣೆ ಕೇಳಿ ನೋಟಿಸ್‌ ಜಾರಿಗೊಳಿಸಿದ್ದರು. ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರ ಬಾರದ ಕಾರಣ, ಪ್ರಧಾನ ಕಾರ್ಯದರ್ಶಿ ಕಟಾರಿಯಾ ಅವರಿಗೂ ನೋಟಿಸ್‌ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ, ಯುಗಾದಿ ಹಬ್ಬದ ರಜೆಯನ್ನು ರದ್ದುಪಡಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಹಾಜರಾಗಿ ಕೆಲಸ ನಿರ್ವಹಿಸುವಂತೆ ಆದೇಶಿಸಲಾಗಿದೆ. ಇದು ವಿಧಾನಸಭೆಯ ಕಾರ್ಯಕಲಾಪಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮಾಡಲಾಗಿದೆ.