ಸ್ಥಳದಲ್ಲೇ ದಂಪತಿ ಸಾವು

Contributed byVijaykumar.belde@timesofindia.com|Vijaya Karnataka

ಬಸವಕಲ್ಯಾಣ ನಗರದ ಬಸ್‌ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಪ್ಪರ್‌ ಲಾರಿ ಮತ್ತು ಬೈಕ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಸೈಯದ್‌ ದಸ್ತಗೀರ್‌ ಮತ್ತು ಯಾಸ್ಮೀನ್‌ ದಸ್ತಗೀರ್‌ ಎಂದು ಗುರುತಿಸಲಾಗಿದೆ. ಈ ಸಂಬಂಧ ಬಸವಕಲ್ಯಾಣ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

tragic death of couple at the scene

ಬಸವಕಲ್ಯಾಣ: ಟಿಪ್ಪರ್ ಲಾರಿ -ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಬಸ್ ನಿಲ್ದಾಣ ಹತ್ತಿರ ಬುಧವಾರ ಸಂಭವಿಸಿದೆ. ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೊನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಮೃತರು. ತ್ರಿಪುರಾಂತ ಬಳಿಯ ಕಾಲೊನಿ ಯೊಂದರಲ್ಲಿವಾಸಿ ಸುತ್ತಿದ್ದ ಮೃತರು, ಬೈಕ್ ಮೇಲೆ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೊನಿಯತ್ತ ತೆರಳುತ್ತಿ ದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಸವಕಲ್ಯಾಣ ಸಿಪಿಐ ಅಲಿಸಾಬ್ , ಪಿಎಸ್ ಐಗಧಿಳಾದ ಸಿದ್ದೇಶ್ವರ ಚಂದ್ರಶೇಖರ್ ನಾರಾ ಯಣಪುರ ಭೇಟಿ ನೀಡಿ ಪರಿಶೀಲಿಸಿದರು. ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.