ಬಜೆಟ್

Contributed byprkarjunagi820@gmail.com|Vijaya Karnataka

ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಿಗೆ ಬಜೆಟ್‌ನಲ್ಲಿ ಅನುದಾನ ನೀಡಿಲ್ಲ. ಸಚಿವ ಎಂ.ಬಿ.ಪಾಟೀಲರು ತಮ್ಮ ಕ್ಷೇತ್ರಕ್ಕೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಜಲಾಶಯ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆ ಮಾತ್ರ ನೀಡಲಾಗಿದೆ. ಯೋಜನೆಗೆ ಹಣ ಮೀಸಲಿಡದೆ ರೈತರಿಗೆ ವಂಚಿಸಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಕುರದಡ್ಡಿ ಹೇಳಿದ್ದಾರೆ.

paper approval for bubaleshwar and tikota irrigation project in budget

ಕಾಗದದ ಮೇಲಷ್ಟೇ ಭರವಸೆ

ಸಿಎಂ ಮಂಡಿಸಿದ ಬಜೆಟ್ ನಲ್ಲಿಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ಜನತೆಗೆ ಕೇವಲ ಕಾಗದದ ಮೇಲೆ ಭರವಸೆ ನೀಡಿ ವಂಚಿಸಲಾಗಿದೆ. ಪ್ರಭಾವಿ ಸಚಿವರಾದ ಎಂ.ಬಿ.ಪಾಟೀಲರು ತಮ್ಮ ಸ್ವಕ್ಷೇತ್ರಕ್ಕೆ ವಾಸ್ತವಿಕ ಅನುದಾನ ತರುವಲ್ಲಿಮತ್ತು ಆಡಳಿತಾತ್ಮಕ ಮೂಲಸೌಕರ್ಯ ಒದಗಿಸುವಲ್ಲಿಸಂಪೂರ್ಣ ವಿಫಲರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯಯನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ಕೇವಲ ತಾತ್ವಿಕ ಅನುಮೋದನೆ ನೀಡಲಾಗಿದೆ. ಯೋಜನೆಗೆ ಬಿಡಿಗಾಸು ಮೀಸಲಿಡದೆ ರೈತರ ಕಣ್ಣಿಗೆ ಮಂಕುಬೂದಿ ಎರಚುವ ತಂತ್ರವಾಗಿದೆ.

-ಸಂತೋಷ ಕುರದಡ್ಡಿ, ತಾಲೂಕು ಅಧ್ಯಕ್ಷ, ಬಿಜೆಪಿ ಮಂಡಲ ಬಬಲೇಶ್ವರ .

ಫೋಟೊ