ರಾಹಿಲ್ ಷರೀಪ್ ಬಂಧನ

Contributed byrudraiah4084@gmail.com|Vijaya Karnataka

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಮುಖಂಡ ಚೇತನಾ ಅವರ ಮೇಲೆ ಹಲ್ಲೆ ನಡೆಸಿದ್ದ ಪ್ರಮುಖ ಆರೋಪಿ ರಾಹಿಲ್‌ ಷರೀಫ್‌ ಅರೆಸ್ಟ್ ಆಗಿದ್ದಾನೆ. ಈತನನ್ನು ಪೊಲೀಸರು ನೇಪಾಳ ಗಡಿಯಲ್ಲಿ ಬಂಧಿಸಿದ್ದಾರೆ. ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿತ್ತು. ಇನ್ಸ್‌ಪೆಕ್ಟರ್‌ ಅಭಯ್‌ ಪ್ರಕಾಶ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದೆ.

congress leader rahil sharif arrested highway theft in chikmagalur

ವಿಕ ಸುದ್ದಿಲೋಕ ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ರಾದ ಚೇತನಾ ಅವರ ಮೇಲೆ ಹಲ್ಲೆನಡೆಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ರಾಹಿಲ್ ಷರೀಪ್ ನನ್ನು ಜಿಲ್ಲಾಪೊಲೀಸರು ನೇಪಾಳದ ಗಡಿಯಲ್ಲಿಬಂಧಿಸಿದ್ದಾರೆ. ಕಳೆದ ವಾರ ಚೇತನಾ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆನಡೆಸಿದ್ದ ಆರೋಪ ರಾಹಿಲ್ ಷರೀಪ್ ಮೇಲಿದೆ. ಕೃತ್ಯದ ಬಳಿಕ ಈತ ಪರಾರಿಯಾಗಿದ್ದ. ಆರೋಪಿಯ ಪತ್ತೆಗಾಗಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ವಿಶೇಷ ತಂಡವನ್ನು ರಚಿಸಿದ್ದರು. ಇನ್ಸ್ ಫೆಕ್ಟರ್ ಅಭಯ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಾಹಿಲ್ ಷರೀಪ್ ನನ್ನು ಬಂಧಿಸುವಲ್ಲಿಯಶಸ್ವಿಯಾಗಿದೆ.