ಕಡಬ ತಾಲೂಕು ಬಿಲ್ಲವ ಸಂಘ ಅಧ್ಯಕ್ಷರಾಗಿ ಸತೀಶ್ ಕೆ.ಐತ್ತೂರು

Contributed bybkyashas2010@gmail.com|Vijaya Karnataka

ಕಡಬ ತಾಲೂಕಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಸತೀಶ್‌ ಕೆ.ಐತ್ತೂರು ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಘಟಕದ ಕಾರ್ಯದರ್ಶಿ ಬಿ.ಟಿ. ಮಹೇಶ್‌ಚಂದ್ರ ಸಾಲ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಘದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜತೆ ಕಾರ್ಯದರ್ಶಿಗಳು, ಕೋಶಾಧಿಕಾರಿ ಹಾಗೂ ಸಮಿತಿ ಸದಸ್ಯರ ಆಯ್ಕೆಯೂ ನಡೆದಿದೆ. ಗೌರವ ಸಲಹೆಗಾರರು ಮತ್ತು ಸಲಹೆಗಾರರನ್ನೂ ನೇಮಿಸಲಾಗಿದೆ.

new president of kadaba taluk billava sangha satish k aithoor

ವಿಕ ಸುದ್ದಿಲೋಕ ಕಡಬ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಡಬ ತಾಲೂಕು ಘಟಕದ ಸ್ಥಾಪಕ ಅಧ್ಯಕ್ಷರಾಗಿ ಸತೀಶ್ ಕೆ.ಐತ್ತೂರು ಆಯ್ಕೆಯಾಗಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ತಾಲೂಕು ಘಟಕದ ಕಾರ್ಯದರ್ಶಿ ಬಿ.ಟಿ. ಮಹೇಶ್ ಚಂದ್ರ ಸಾಲ್ಯಾನ್ ಅಧ್ಯಕ್ಷತೆಯಲ್ಲಿನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಉಪಾಧ್ಯಕ್ಷರಾಗಿ ಅಜಿತ್ ಪಾಲೇರಿ, ರವಿ ಮಾಯಿಲ್ಗ ಹಾಗೂ ಗೀತಾ ಉಂಡಿಲ ,ಕಾರ್ಯದರ್ಶಿಯಾಗಿ ಮಿಥುನ್ ಸುಂದರ್ ಪಲ್ಲತ್ತಡ್ಕ, ಜತೆ ಕಾರ್ಯದರ್ಶಿಗಳಾಗಿ ಲಕ್ಷ್ಮೀಶ್ ಬಂಗೇರ ಪೆಲತ್ತೋಡಿ, ಅಶ್ವತ್ ್ಥ ಸಾಂತ್ಯ ಮತ್ತು ಕೃಷ್ಣಪ್ಪ ಅಮೈ,ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ಮರಕ್ಕಡ, ಸಮಿತಿ ಸದಸ್ಯರಾಗಿ ದಿನೇಶ್ ಕೇಪುಲು, ಉಮೇಶ್ ಪೂಜಾರಿ ಬಳ್ಪ, ವಸಂತ ಪೂಜಾರಿ ಬದಿಬಾಗಿಲು, ಅಭಿಲಾಷ್ ಪಿ.ಕೆ. ಕಲ್ಲುಗುಡ್ಡೆ, ಸಂತೋಷ್ ಗುಂಡ್ಯ, ಉಮೇಶ್ ಕಾರ್ಲಾಡಿ, ಬಾಲಕೃಷ್ಣ ಬಾಣಜಾಲು, ಡಾ. ರವಿ ಕಕ್ಕೇಪದವು ಹಾಗೂ ಬಾಲಕೃಷ್ಣ ನೂಜಾಡಿ, ಗೌರವ ಸಲಹೆಗಾರರಾಗಿ ಜಿನ್ನಪ್ಪ ಸಾಲ್ಯಾನ್ ಕಡಬ, ವಿಜಯಕುಮಾರ್ ಸೊರಕೆ, ಸಲಹೆಗಾರರಾಗಿ ನಾರಾಯಣ ಪೂಜಾರಿ ಪಾಲಪ್ಪೆ, ಆನಂದ ಟೈಲರ್ , ಉಷಾ ಅಂಚನ್ , ಅಶೋಕ್ ಕೊಯಿಲ, ಲಿಂಗಪ್ಪ ಪೂಜಾರಿ ಕೇಪುಲು, ಶಶಿಧರನ್ ಕಟ್ಟತ್ತಡ್ಕ, ಕುಮಾರಿ ವಾಸುದೇವನ್ , ಸಂತೋಷ್ ಮಾತ್ರಾಡಿ ಹಾಗೂ ಡಾ. ಸದಾನಂದ ಕುಂದರ್ ನೆಲ್ಯಾಡಿ ಆಯ್ಕೆಯಾಗಿದ್ದಾರೆ.

(ಸತೀಶ್ ಕೆ.:ಫೊಟೋ ಫೈಲ್ ನೇಮ್ 9ಕೆಡಿಬಿ ಎಸ್ ಕೆ)