ಚಿಧಿತ್ರಧಿಸುದ್ದಿ, ಚೂಧಿರು

Contributed byravimgl.kumar13@gmail.com|Vijaya Karnataka

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೋರಿ ಉಪವಾಸ ಸತ್ಯಾಗ್ರಹ ನಡೆಸಿದ ಕೆ.ಟಿ.ತಿಪ್ಪೇಸ್ವಾಮಿ ಅವರ ಆರೋಗ್ಯಕ್ಕಾಗಿ ವೀರ ಸಂಗೊಳ್ಳಿ ರಾಯಣ್ಣ ಸೇನೆ ಕಾರ್ಯಕರ್ತರು ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇತ್ತ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಆದ್ಯಾ ಫಾರ್ಮಸಿ ಕಾಲೇಜಿನ 43 ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಶ್ರೇಣಿ ರ‍್ಯಾಂಕ್‌ ಪಡೆದು ಸಾಧನೆಗೈದಿದ್ದಾರೆ. ಈ ಸಾಧನೆಗೆ ಸಂಸ್ಥೆಯ ಮುಖ್ಯಸ್ಥರು ಅಭಿನಂದನೆ ಸಲ್ಲಿಸಿದರು.

special prayer for farmers welfare in chitradurga

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಐದು ದಿನ ಉಪವಾಸ ಸತ್ಯಾಗ್ರಹದ ಬಳಿಕ ಕುಸಿದುಬಿದ್ದು ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಚಿಧಿತ್ರಧಿದುಧಿರ್ಗದ ವೀರ ಸಂಗೊಳ್ಳಿ ರಾಯಣ್ಣ ಸೇನೆ ಕಾರ್ಯಕರ್ತರು ನಗರ ದೇವತೆ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿಭಾನುವಾರ ವಿಶೇಷ ಪೂಜೆ ಸಲ್ಲಿಸಿದರು. ಸೇನೆ ರಾಜ್ಯಾಧ್ಯಕ್ಷ ಟಿ.ಆನಂದ್ , ಮುಖಂಡರಾದ ತಿಮ್ಮೆಶ್ , ಪ್ರಜ್ವಲ್ , ವಿಜಯಕುಮಾರ್ ಇತರರಿದ್ದರು. ಪ್ರಧಾನ ಅರ್ಚಕ ವಿಶ್ವನಾಥ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.

ಫೋಟೊ ಕ್ಯಾಪ್ಷನ್ /9ಸಿಟಿಡಿ36

---

43 ವಿಧಿದ್ಯಾಧಿರ್ಥಿಧಿಗಳು ರಾರ ಯಂಕ್

ಚಿಧಿತ್ರಧಿದುಧಿರ್ಗ: ಕಧಿಳೆದ ವರ್ಷ ನವೆಂಬರ್ ನಲ್ಲಿಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿಚಿತ್ರದುರ್ಗದ ಆದ್ಯಾ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಿ.ಫಾಮ್ ರ್ 1ನೇ ವರ್ಷದಿಂದ ನಾಲ್ಕನೆ ವರ್ಷದವರೆಗೆ ಒಟ್ಟು 240 ವಿದ್ಯಾರ್ಥಿಗಳಲ್ಲಿ43 ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಶ್ರೇಣಿ ರಾರ ಯಂಕ್ ಗಳನ್ನು ಪಡೆದಿದ್ದಾರೆ. ಈ ವಿದ್ಯಾರ್ಥಿಗಳನ್ನು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಚಂದ್ರಕಲಾ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ , ಕಾಲೇಜಿನ ಪ್ರಾಚಾರ್ಯ ಡಾ.ಮುತಾಹರ್ ಅಭಿನಂದಿಸಿದ್ದಾರೆ.