ಆಲಮಟ್ಟಿಗಾಗಿ ಕೇಂದ್ರ ಬಳಿ ನಿಯೋಗ

Contributed byshashidhar.nandikal@timesgroup.com|Vijaya Karnataka

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಆಂಧ್ರ ಪ್ರದೇಶ ಸರಕಾರ ಸುಪ್ರೀಂಕೋರ್ಟ್‌ ನಲ್ಲಿ ಅಡ್ಡಗಾಲು ಹಾಕಿದೆ. ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರಕ್ಕೆ ಪತ್ರ ಬರೆದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಆದೇಶದಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆಂಧ್ರ ಹಾಗೂ ಮಹಾರಾಷ್ಟ್ರ ಸರಕಾರದವರು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದಿದ್ದಾರೆ. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ನೋಟಿಫಿಕೇಷನ್‌ ಗಾಗಿ ಒತ್ತಡ ಹೇರಲಾಗುತ್ತಿದೆ.

proposal for land acquisition at almatti height increase urging the center

ವಿಕ ಸುದ್ದಿಲೋಕ ಬೆಂಗಳೂರು ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳಕ್ಕೆ ಆಂಧ್ರ ಪ್ರದೇಶ ಸರಕಾರ ಅಡ್ಡಗಾಲು ಹಾಕುತ್ತಿದ್ದು, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರಕ್ಕೆ ಪತ್ರ ಬರೆದಿದೆ. ಹಾಗಾಗಿ ಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ವಿಧಾನಸೌಧದಲ್ಲಿಮಾಧ್ಯಮಗಳೊಂದಿಗೆ ಮಂಗಳ ವಾರ ಮಾತನಾಡಿ,‘‘ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸಲು ಅನುಮತಿ ನೀಡಬಾರದು ಹಾಗೂ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಬಾರದು ಎಂದು ಆಂಧ್ರ ಸರಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಆಂಧ್ರ ಹಾಗೂ ಮಹಾರಾಷ್ಟ್ರ ಸರಕಾರದವರು ಈ ವಿಚಾರದಲ್ಲಿಮಧ್ಯಪ್ರವೇಶ ಮಾಡುವುದು ಒಳ್ಳೆಯದಲ್ಲ,’’ ಎಂದು ಹೇಧಿಳಿದರು. ‘‘ಸಂಪುಟ ಸಭೆಯ ತೀರ್ಮಾನದಂತೆ 1.33 ಲಕ್ಷ ಎಕರೆಯನ್ನು ಒಂದೇ ಬಾರಿಗೆ ಸ್ವಾಧೀನ ಪಡಿಸಿಕೊಂಡು 70 ಸಾವಿರ ಕೋಟಿ ರೂ. ಅನ್ನು ಮೂರು ಹಂತದಲ್ಲಿನೀಡಲು ಮುಂದಾಗಲಾಗಿತ್ತು. ಎಕರೆಗೆ 35-40 ಲಕ್ಷ ರೂ. ಪರಿಹಾರ ನಿಗದಿಗೊಳಿಸ ಲಾಗಿದೆ. ಈ ಭೂಸ್ವಾಧೀನವನ್ನು ಆಂಧ್ರ ಸರಕಾರ ಪ್ರಶ್ನಿಸಿದೆ. ಅವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ಎಣಿಸಿರಲಿಲ್ಲ. ಕಳೆದ 12 ವರ್ಷದಿಂದಲೂ ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ನೋಟಿಫಿಕೇಷನ್ ಮಾಡಿ ಎಂದು ಒತ್ತಡ ಹೇರುತ್ತಲೇ ಇದ್ದೇವೆ. ನವಿಲೆಯಲ್ಲಿಸಮಾನಾಂತರ ಆಣೆಕಟ್ಟೆ ನಿರ್ಮಿಸಿ ನಮ್ಮ ಪಾಲಿನ 30 ಟಿಎಂಸಿ ನೀರನ್ನು ಬಳಸಿಕೊಳ್ಳಬೇಕಿದೆ ಎಂದು ಬೋರ್ಡ್ ಮುಂದೆ ತಿಳಿಸಿದ್ದೇವೆ. ಆದರೆ, ಆಂಧ್ರ ಪ್ರದೇಶದವರು ಈ ಸಭೆಗೆ ಬರುತ್ತಿಲ್ಲ. ನಮ್ಮ ನೀರು ಅವರಿಗೆ ಹರಿದು ಹೋಗುತ್ತಿದೆ,’’ ಎಂದು ಹೇಳಿದರು.

ಓದಲೇ ಬೇಕಾದ ಸುದ್ದಿ