ನೆಲಮಂಗಲ (ಬೆಂಗಳೂರು ಗ್ರಾಮಾಂತರ): ತಾಲೂಕಿನ ಬರದಿ ಗ್ರಾಮದಲ್ಲಿಬಿಸಿಲಿನಲ್ಲಿನಿಂತಿದ್ದ ವೃದ್ಧರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಚಿಕ್ಕಣ್ಣ(70) ಮೃತರು.
ಬರದಿ ಗ್ರಾಮದ ಕೋಳಿ ಫಾರಂವೊಂದರಲ್ಲಿಚಿಕ್ಕಣ್ಣ ಕೆಲಸ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿಅಂಗಡಿಗೆ ತೆರಳಿದ್ದ ವೇಳೆ ಬಿಸಿಲಿನಲ್ಲಿನಿಂತಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

