ವಿಕ ಸುದ್ದಿಲೋಕ ಬೆಂಗಳೂರು
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು (ಕೆಎಸ್ ಟಿಎ) ವಿಜ್ಞಾನ ಮತ್ತು ತಂತ್ರಜ್ಞಾನ ಆಸಕ್ತರಿಗಾಗಿ ‘ಸುಧಾರಿತ ದತ್ತಾಂಶ ವಿಜ್ಞಾನ , ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ’ ವಿಷಯದ ಕುರಿತು ಮೇ 18 ರಿಂದ 20ರವರೆಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.
ವಿದ್ಯಾರಣ್ಯಪುರದ ಪ್ರೊ. ಯು.ಆರ್ . ರಾವ್ ವಿಜ್ಞಾನ ಭವನದಲ್ಲಿಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದಲ್ಲಿನಾನಾ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಈ ಕಾರ್ಯಾಗಾರದಲ್ಲಿಭಾಗವಹಿಸಲು ಅವಕಾಶವಿದೆ.
ಆಸಕ್ತರು ಮೇ 16ರೊಳಗಾಗಿ ಗೂಗಲ್ ಫಾಮ್ ರ್ ಘ್ಕಿhಠಿಠಿps://್ಛಟ್ಟಞs.ಜ್ಝಛಿ/ಈy್ಛ9ಓ್ಛಕಿ8ಖh್ಞ್ಕಔಈಏಏ6 ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರನ್ನು 9620767819 ಮೂಲಕ ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ಅಧಿಕೃತ ವೆಬ್ ಸೈಟ್ ಘ್ಕಿhಠಿಠಿps://ksಠಿa್ಚadಛಿಞy.ಜ್ಞಿ ವೀಕ್ಷಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್ . ಪ್ರಕಟಣೆಯಲ್ಲಿತಿಳಿಸಿದ್ದಾರೆ.

