ಶಾಸಕ ರಾಜಾಸಿಂಗ್ ಪ್ರವೇಶಕ್ಕೆ ನಿರ್ಬಂಧ

Contributed byMANJUNATH SWAMY|Vijaya Karnataka

ಯಾದಗಿರಿ ಜಿಲ್ಲೆಯಲ್ಲಿ ಮೇ ೨೧ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿದ್ದ ತೆಲಂಗಾಣ ಶಾಸಕ ರಾಜಾಸಿಂಗ್‌ ಠಾಕೂರ ಅವರಿಗೆ ಜಿಲ್ಲಾಧಿಕಾರಿಗಳು ಪ್ರವೇಶ ನಿರ್ಬಂಧ ವಿಧಿಸಿದ್ದಾರೆ. ಉದ್ರೇಕಕಾರಿ ಭಾಷಣದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ಮೇ ೨೧ರಿಂದ ಒಂದು ತಿಂಗಳ ಕಾಲ ಜಿಲ್ಲೆಗೆ ಪ್ರವೇಶಿಸದಂತೆ ಆದೇಶಿಸಲಾಗಿದೆ.

restriction on rajasinghs entry order to maintain law and order

ಶಾಸಕ ರಾಜಾಸಿಂಗ್ ಪ್ರವೇಶಕ್ಕೆ ನಿರ್ಬಂಧ

ವಿಕ ಸುದ್ದಿಲೋಕ ಯಾದಗಿರಿ

ನಗರದಲ್ಲಿಮೇ 21ರಂದು ಹಮ್ಮಿಕೊಂಡಿರುವ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದ ಮುಖ್ಯ ಭಾಷಣಕಾರ ಹಾಗೂ ತೆಲಂಗಾಣ ರಾಜ್ಯದ ಶಾಸಕ ರಾಜಾಸಿಂಗ್ ಠಾಕೂರ ಅವರನ್ನು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ.

ಜೈ ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ. ಸಾವರ್ಕರ್ ಸೇನಾ ವತಿಯಿಂದ ಜಯಂತಿ ಅಂಗವಾಗಿ 21ರಂದು ಶೋಭಾಯಾತ್ರೆ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ, ರಾಜಾಸಿಂಗ್ ಠಾಕೂರ ಅವರು ಉದ್ರೇಕಕಾರಿ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಮೇ 21 ರಿಂದ ಒಂದು ತಿಂಗಳವರೆಗೆ ಯಾದಗಿರಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶಿಸಲಾಗಿದೆ.