ಶಿವಶರಣರ ಸಮಾವೇಶ

Contributed byShridevi Ambekallu|Vijaya Karnataka

ಗದಗದಲ್ಲಿ ಮೇ 31ರಂದು ಸಂಜೆ 5 ಗಂಟೆಗೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ನಡೆಯಲಿದೆ. ಕೊಲ್ಹಾಪುರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಸಮಾರಂಭದ ನೇತೃತ್ವ ವಹಿಸಲಿದ್ದಾರೆ. ನಾಡಿನ 300ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಭೂಮರೆಡ್ಡಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಸಾವಿರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು.

hindu assembly a grand gathering of shivasharanas

ಶಿವಶರಣರ ಸಮಾವೇಶ

ಗದಗ: ಹಿಂದೂ ಸರ್ವ ಸಮಾಜಗಳ ಒಕ್ಕೂಟದ ಜಿಲ್ಲಾಘಟಕದಿಂದ ಮೇ 31ರಂದು ಸಂಜೆ 5 ಗಂಟೆಗೆ ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಸಂಚಾಲಕ ರಾಜು ಖಾನಪ್ಪನವರ ತಿಳಿಸಿದರು.

ಸೋಮವಾರ ನಗರದ ಶ್ರೀ ಮಹಾವೀರ ಗೋಸೇವಾ ಸಮಿತಿ ಸಭಾಂಗಣದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ‘ಕೊಲ್ಹಾಪುರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿಈ ಸಮಾವೇಶ ನಡೆಯಲಿದೆ. ನಾಡಿನ 300ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ನಗರದ ಭೂಮರೆಡ್ಡಿ ವೃತ್ತದಿಂದ ವಿದ್ಯಾದಾನ ಸಮಿತಿ ಮೈದಾನದವ ವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿಸಾವಿರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಲಿದ್ದಾರೆ’ ಎಂದರು.