ವಿಕ ಸುದ್ದಿಲೋಕ ಇಂಡಿ‘‘ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಭಾಗದ ಜನರು ಬದುಕು ಕಟ್ಟಿಕೊಳ್ಳಲು ಸಹಾಯಕವಾಗಿವೆ’’ ಎಂದು ನಾದ ಬಿ.ಕೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮರಾಯ ಅವುಜಿ ಹೇಳಿದರು.
ನಾದ (ಬಿ.ಕೆ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘‘ಸಹಕಾರ ಸಂಘಗಳ ಶ್ರೇಯೋಭಿವೃದ್ಧಿಗೆ ಜನರ ಸಹಕಾರ ಮುಖ್ಯ. ಸಾಲ ಪಡೆದವರು ಸಕಾಲದಲ್ಲಿಸಾಲ ಮರು ಪಾವತಿ ಮಾಡಬೇಕು’’ ಎಂದರು.