‘‘ಹಗಲು ಹೊತ್ತು 7 ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು’’ ಎಂದು ಆಗ್ರಹಿಸಿ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ಶಿರಶ್ಯಾಡದ ರೈತ ಮುಖಂಡ ಬಾಳು ಮುಳಜಿ ಮಾತನಾಡಿ, ‘‘ವಿದ್ಯುತ್ ಸರಬರಾಜಿನಲ್ಲಿಪದೇ ಪದೆ ವ್ಯತ್ಯಯ ಉಂಟಾಗುತ್ತಿದೆ. ರಾತ್ರಿ 3ರಿಂದ ಬೆಳಗ್ಗೆ 10ರವರೆಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ರಾತ್ರಿ 10ರ ನಂತರ ಸಿಂಗಲ್ ಫೇಜ್ ವಿದ್ಯುತ್ ನೀಡಲಾಗುತ್ತಿದೆ. ಅನೇಕ ಕಡೆ ವಿದ್ಯುತ್ ವ್ಯತ್ಯಯದಿಂದ ವಿದ್ಯಾರ್ಥಿಗಳು ಹಾಗೂ ರೈತರು ತೊಂದರೆ ಅನುಭವಿಸಬೇಕಾಗುತ್ತಿದೆ. ಆದ್ದರಿಂದ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿ ಅನುಕೂಲ ಮಾಡಿಕೊಡಬೇಕು’’ ಎಂದು ಒತ್ತಾಯಿಸಿದರು.
ಹೆಸ್ಕಾಂ ಅಧಿಕಾರಿಗಳು ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಕೆಯ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆಯನ್ನು ಹಿಂಪಡೆದರು. 500ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿಭಾಗವಹಿಸಿದ್ದರು.