ಸಿಗಂದೂರು ದಸರಾ, ಜನಸಾಗರ

Curated byಶ್ರೀಲಕ್ಷ್ಮೀ ಎಚ್ಎಲ್|Vijaya Karnataka

ತುಮರಿಯ ಸಿಗಂದೂರು ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಗುರುವಾರ ನವರಾತ್ರಿ ದಸರಾ ವೈಭವ ಸಂಭ್ರಮದಿಂದ ನಡೆಯಿತು. ಸೇತುವೆ ನಿರ್ಮಾಣದ ನಂತರದ ಮೊದಲ ದಸರಾ ಇದಾಗಿದ್ದು, ರಾಜ್ಯದ ನಾನಾಕಡೆಯಿಂದ ಅಪಾರ ಭಕ್ತಸಾಗರ ಉತ್ಸಾಹದಿಂದ ಹರಿದುಬಂದಿತ್ತು. ವಿಶೇಷ ಪೂಜೆ, ಚಂಡಿಕಾಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನೂಕುನುಗ್ಗಲು ನಿಯಂತ್ರಿಸಲು ಸಿಬ್ಬಂದಿ ಹರಸಾಹಸಪಟ್ಟರು.

dasara celebration in sigandooru
ತುಮರಿ (ಶಿವಮೊಗ್ಗ) : ಸಿಗಂದೂರು ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಗುರುವಾರ ನವರಾತ್ರಿ ದಸರಾ ವೈಭವ ಸಂಭ್ರಮದಿಂದ ನಡೆಯಿತು. ಮಹೋತ್ಸವಕ್ಕೆ ರಾಜ್ಯದ ನಾನಾಕಡೆಯಿಂದ ಜನಸಾಗರವೇ ಹರಿದುಬಂದಿತ್ತು. ಸೇತುವೆಯಾದ ನಂತರ ಮೊಟ್ಟ ಮೊದಲ ದಸರಾದಲ್ಲಿ ಭಕ್ತಾದಿಗಳು ಉತ್ಸಾಹದಿಂದ ಪಾಲ್ಗೊಂಡರು. ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಶ್ರೀ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ, ಅಲಂಕಾರ, ದೇವಿ ಪಾರಾಯಣ, ಚಂಡಿಕಾಹೋಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳು ವಿವಿಧ ಪೂಜೆ, ಹೋಮ-ಹವನಗಳಲ್ಲಿಪಾಲ್ಗೊಂಡಿದ್ದರು. ನೂಕುನುಗ್ಗಲು ನಿಯಂತ್ರಿಸಲು ದೇವಸ್ಥಾನದ ಸಿಬ್ಬಂದಿ, ಪೊಲೀಸರು ಹರಸಾಹಸಪಟ್ಟರು.
ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಕಾರ್ಕಳ ಶಾಸಕ ಸುನಿಲ್‌ಕುಮಾರ್‌, ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪ, ಕಲಗೋಡು ರತ್ನಾಕರ ಮುಂತಾದವರು ಕ್ಷೇತ್ರಕ್ಕೆ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನವರಾತ್ರಿಯ 9 ದಿನಗಳಲ್ಲಿಭರತನಾಟ್ಯ, ಹರಿಕಥೆ, ಯಕ್ಷಗಾನ ತಾಳಮದ್ದಳೆ, ಭಜನೆ, ಸಂಗೀತ ಕಾರ್ಯಕ್ರಮಗಳು ನಡೆದವು.

ಸಿಗಂದೂರು ಕ್ಷೇತ್ರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕುಟುಂಬದೊಂದಿಗೆ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಕಾರ್ಯದರ್ಶಿ ಎಚ್‌.ಆರ್‌.ರವಿಕುಮಾರ್‌ ಮತ್ತಿತರರು ಹಾಜರಿದ್ದರು.
ಶ್ರೀಲಕ್ಷ್ಮೀ ಎಚ್ಎಲ್

ಲೇಖಕರ ಬಗ್ಗೆಶ್ರೀಲಕ್ಷ್ಮೀ ಎಚ್ಎಲ್ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ