New Opportunities Launched For The Development Of The Okkaliga Community
ಒಕ್ಕಲಿಗ ಸಮುದಾಯಕ್ಕೆ ಆನ್ಲೈನ್ ಮೂಲಕ ಹೊಸ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
Vijaya Karnataka•
ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ ನೀರಾವರಿ, ಶೈಕ್ಷಣಿಕ ಸಾಲ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಜುಲೈ 2 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ ಅಥವಾ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಗಳೂರು: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳು ಮತ್ತು ಸೌಲಭ್ಯಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ , ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹೊಸ ವಿದ್ಯಾರ್ಥಿಗಳಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ .ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ನ ಗ್ರಾಮಒನ್/ ಬೆಂಗಳೂರು ಒನ್ / ಕರ್ನಾಟಕ ಒನ್ ಮೂಲಕ ಆನ್ಲೈನ್ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜು.2ರೊಳಗೆ ಸಲ್ಲಿಸಬೇಕು. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ವೆಬ್ಸೈಟ್ ಅಥವಾ ನಿಗಮದ ದೂರವಾಣಿ ಸಂಖ್ಯೆ 0824-2456544 ಸಂಪರ್ಕಿಸಬಹುದು ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಚೇರಿ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.